ಅಂತಃ'ಪುರ’ ಗೀತೆ
ಗಂಗೆಯಾ ನೊರೆ ಹಾಲು, ಒಂದೆಲಗ ಸಿಹಿ ತಂಬ್ಳಿ
ಈ ಸಾಲ ಸಾಲದೂಂತ
ಹೋಗೋದಿದ್ರೆ ಹೋಗು
ಸಿಟಿ ಯಾಕೊ ಸಿಡುಕ್ಯಾಕೊ ನನ ಗಂಡ
(ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನ ಕಾಡೊಳಗಿನ ಊರೊಂದರಲ್ಲಿ ಅಡಿಕೆ ಕೃಷಿಯಲ್ಲಿ ಬದುಕುತ್ತಿದ್ದ ನಾಲ್ವರ ಮಧ್ಯಮ ವರ್ಗದ ಕುಟುಂಬ. ಮಗಳು ದೂರದ ಹಾಸ್ಟೆಲ್ನಲ್ಲಿ ಇದ್ದುಕೊಂಡು ಹೈಸ್ಕೂಲು ಓದುತ್ತಿದ್ದಳು. ಮಗನಿಗೆ ಐದಾರು ವರ್ಷ. ನಲವತ್ತರ ವಯಸ್ಸಿನ ಆ ಮನೆಯ ಯಜಮಾನ ಆರೇಳು ಕೋಣೆಗಳ ಹೊಸ ತಾರಸಿ ಮನೆ ಕಟ್ಟಿಸಿದರು. ಗೃಹಪ್ರವೇಶವಾದ ತಿಂಗಳಲ್ಲೇ ಬೆಂಗಳೂರಿಗೆ ಬಂದು ಸಣ್ಣ ಕೋಣೆ ಹಿಡಿದರು. ಯಾಕೆ ಅಂತೀರಾ? ಬೆಂಗಳೂರಲ್ಲಿ ದುಡಿದು ಸಂಪಾದಿಸಿ, ಮನೆ ಕಟ್ಟಲು ಮಾಡಿದ ಸಾಲ ತೀರಿಸಲು !
ಹಳ್ಳಿಗಳಲ್ಲಿರುವ 'ಸ್ಥಿತಿವಂತ-ಗುಣವಂತ’ ಹುಡುಗರನ್ನೂ ಧಿಕ್ಕರಿಸಿ ನಗರದಲ್ಲಿರುವ ಹುಡುಗನೇ ಆಗಬೇಕೆಂದು ಬಹುತೇಕ ಯುವತಿಯರು ಪಟ್ಟು ಹಿಡಿಯುತ್ತಿರುವ ಕಾಲದಲ್ಲಿ, ಈ ಮನೆಯ ಸ್ಥಿತಿ ಕೊಂಚ ವ್ಯತ್ಯಸ್ಥವಾಗಿದೆ ಅವರ ಪತ್ನಿ ಏನಂದರೋ ಗೊತ್ತಿಲ್ಲ. ಅಂತೂ ಈ ಪದ್ಯ ಅರ್ಧ ಹೊಸೆದಿರುವಾಗ, ಆ ಘಟನೆ ನೆನಪಾಗಿ ಬರೆದುಕೊಂಡಿದ್ದೇನೆ.)

